Kannada NewsLatest

ಉಲ್ಟಾ ಹೊಡೆದ ಸಿಡಿ ಲೇಡಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಇಡೀ ಪ್ರಕರಣ ಬಗ್ಗೆ ಯುವತಿ ಉಲ್ಟಾ ಹೊಡೆಯುವ ಮೂಲಕ ಹೊಸ ತಿರುವು ಪಡೆದುಕೊಂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ ಯುವತಿ ಇಂದು ಇಡೀ ಪ್ರಕರಣದ ಬಗ್ಗೆ ಉಲ್ಟಾ ಹೊಡೆದಿದ್ದು, ನನ್ನನ್ನು ಹನಿ ಟ್ರ್ಯಾಪ್ ಗೆ ಸಿಲುಕಿಸಿ ಈ ಕೃತ್ಯ ಎಸಗಲಾಗಿದೆ. ಸಿಡಿ ಕಿಂಗ್ ಪಿನ್ ಗಳಾದ ಮಾಜಿ ಪತ್ರಕರ್ತ ನರೇಶ್ ಹಾಗೂ ಶ್ರವಣ್ ನನ್ನನ್ನು ಹನಿಟ್ರ್ಯಾಪ್ ಮಾಡಿ ಕೃತ್ಯಕ್ಕೆ ಬಳಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾಳೆ.

ಸಂತ್ರಸ್ತೆ ನೀಡಿದ ಈ ಹೇಳಿಕೆ ಬೆನ್ನಲ್ಲೇ ಎಸ್ ಐಟಿ ಅಧಿಕಾರಿಗಳು ಇದೀಗ ಮತ್ತೊಮ್ಮೆ ಯುವತಿಯನ್ನು ಜಡ್ಜ್ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ.
ಪ್ರಯಾಣಿಕರ ಮೇಲೆ ಹರಿದ ಲಾರಿ; ಬಾಲಕಿ ದುರಂತ ಅಂತ್ಯ

Home add -Advt

Related Articles

Back to top button