Kannada NewsLatest

ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಪ್ರಕರಣದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂಗೀಕರಿಸಿದ್ದಾರೆ.

ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ನಾನು ನಿರ್ದೋಷಿಯಾಗುವ ವಿಶ್ವಾಸವಿದ್ದರೂ ನೈತಿಕ ಹೊಣೆಹೊತ್ತು ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಅಂಗೀಕರಿಸುವಂತೆ ಸಿಎಂ ಯಡಿಯೂರಪ್ಪನವರಿಗೆ ರಮೇಶ್ ಜಾರಕಿಹೊಳಿ ಪತ್ರ ರವಾನಿಸಿದ್ದರು.

ಪತ್ರ ಸ್ವೀಕೃತವಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಯಡಿಯೂರಪ್ಪ ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಿ ಸಹಿ ಮಾಡಿ, ರಾಜ್ಯಪಾಲರಿಗೆ ರವಾನೆ ಮಾಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button