Kannada NewsLatest
ಆರ್.ಎಸ್.ಎಸ್ ಮುಖಂಡ ಅರವಿಂದರಾವ್ ದೇಶಪಾಂಡೆ ಭೇಟಿಯಾದ ರಮೇಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮತ್ತೆ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಭಾರಿ ಕಸರತ್ತು ನಡೆಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರ್.ಎಸ್.ಎಸ್.ಮುಖಂಡರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿಯಲ್ಲಿರುವ ಆರ್.ಎಸ್.ಎಸ್ ಮುಖಂಡ ಅರವಿಂದರಾವ್ ನಿವಾಸಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ, ಮಹತ್ವದ ಮಾತುಕತೆ ನಡೆಸಿದ್ದಾರೆ.
ಅರವಿಂದರಾವ್ ಉತ್ತರ ಪ್ರಾಂತ್ಯದ ಆರ್.ಎಸ್.ಎಸ್ ಪ್ರಮುಖರಾಗಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ್ದಾರೆ.
ಮಾಜಿ ಸಿಎಂ ಬಿಎಸ್ ವೈ ಭೇಟಿಯಾದ ಸಿಎಂ ಬೊಮ್ಮಾಯಿ; ಅಸಮಾಧಾನಿತರ ಸಮಾಧಾನಕ್ಕೆ ಹೊಸ ತಂತ್ರ..?




