Latest

ಡಿ.ಕೆ.ಶಿವಕುಮಾರ್ ವಿರುದ್ಧ ಗೋಕಾಕಲ್ಲಿ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಷ್ಯಡ್ಯಂತ್ರ ನಡೆಸಿದ್ದು, ತಕ್ಷಣ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಗೋಕಾಕಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಗೋಕಾಕ್  ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿರುವ ಬೆಂಬಲಿಗರು ಡಿ.ಕೆ.ಶಿವಕುಮಾರ್ ಅವರ ಅಣುಕು ಶವಯಾತ್ರೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ರಮೇಶ್ ಜಾರಕಿಹೊಳಿ ಬೆಂಬಲಿಗರು, ಡಿ.ಕೆ.ಶಿವಕುಮಾರ್ ರಾಜಕೀಯಕ್ಕಾಗಿ   ಸಿಡಿ ಷಡ್ಯಂತ್ರ ನಡೆಸಿದ್ದಾರೆ. ತಕ್ಷಣ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಬೆಳಗಾವಿಗೆ ಇಂದು ಡಿ.ಕೆ.ಶಿವಕುಮಾರ್ ಎಂಟ್ರಿ; ಕುತೂಹಲ

Home add -Advt

ಸಿಡಿ ಪ್ರಕರಣ; ರಮೇಶ್ ಜಾರಕಿಹೊಳಿ, ಡಿಕೆಶಿ ನಿವಾಸಕ್ಕೆ ಟೈಟ್ ಸೆಕ್ಯೂರಿಟಿ

Related Articles

Back to top button