Kannada NewsKarnataka NewsLatest

*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಜೈಲಿನಲ್ಲಿದ್ದ ಆರೋಪಿ NIA ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-ಎನ್ ಐಎ ಅಧಿಕಾರಿಗಳು ಜೈಲಿನಲ್ಲಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮಾಜ್ ಮುನೀರ್ ಎಂಬಾತನನ್ನು ಬಾಡಿ ವಾರೆಂಟ್ ಮೇಲೆ ಎನ್ ಐಎ ವಶಕ್ಕೆ ಪಡೆದಿದೆ. ಆರೋಪಿ ಮಾಜ್ ಮುನೀರ್ ನನ್ನು 7 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದೆ.

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ ನಲ್ಲಿ ಮಾಜ್ ಮುನೀರ್ ಬಂಧನವಾಗಿತ್ತು. ಬಳಿಕ ಆತ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ. ಈತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ.

Home add -Advt

Related Articles

Back to top button