*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಶಂಕಿತ NIA ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೋರ್ವನನ್ನು ಬಳ್ಳಾರಿಯಲ್ಲಿ ಎನ್ ಐ ಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿಯಲ್ಲಿ ಶಬ್ಬೀರ್ ಎಂಬ ಶಂಕಿತನನ್ನು ವಶಕ್ಕೆ ಪಡೆದಿರುವ ಎನ್ ಐ ಎ ಅಧಿಕಾರಿಗಳು ವಿಚಾರಣೆಗಾಗಿ ಬೆಂಗಳೂರಿಗೆ ಕರೆ ತರುತ್ತಿದ್ದಾರೆ. ಮಾರ್ಚ್ 1ರಂದು ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ನಡೆದಿತ್ತು. ಪ್ರಕರಣವನ್ನು ಸರ್ಕಾರ ಎನ್ ಐಎ ತನಿಖೆಗೆ ವಹಿಸಿದೆ. ಬಾಂಬರ್ ಬಗ್ಗೆ ತೀವ್ರ ಶೋಧ ನಡೆಸಲಾಗುತ್ತಿದ್ದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ … Continue reading *ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಶಂಕಿತ NIA ವಶಕ್ಕೆ*