Karnataka News
*ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಕಾರ್ಮಿಕ ಸಾವು*

ಪ್ರಗತಿವಾಹಿನಿ ಸುದ್ದಿ: ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಚಳ್ಳಕೆರೆಯ ಗಾಂಧಿನಗರದಲ್ಲಿ ನಡೆದಿದೆ.
48 ವರ್ಷದ ರಂಗಸ್ವಾಮಿ ಮೃತ ದುರ್ದೈವಿ. ಡಿ.18ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರಸಭೆ ಕಂದಾಯ ನಿರೀಕ್ಷಕ ಗುರುಪ್ರಸಾದ್ ದೂಈರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಯಾಣ ಮಂಟಪದ ಮಾಲೀಕ ಗುರುವೀರ ನಾಯಕ್ ವಿರುದ್ಧ ದೂರು ದಾಖಲಾಗಿದೆ.




