Kannada NewsKarnataka NewsPolitics
*ಮತ್ತಷ್ಟು ಹೆಚ್ಚಾಯ್ತು ಬಂಧನ ಭೀತಿ: ಶಾಸಕ ಪ್ರಭು ಚೌವ್ಹಾಣ್ ಪುತ್ರನ ಜಾಮೀನು ಅರ್ಜಿ ವಜಾ*

ಪ್ರಗತಿವಾಹಿನಿ ಸುದ್ದಿ: ಮದುವೆ ನಿಶ್ಚಿತಾರ್ಥದ ಬಳಿಕ ಅತ್ಯಾಚಾರವೆಸಗಿ ಕೈಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಪ್ರಭು ಚೌವ್ಹಾಣ್ ಪುತ್ರ ಪ್ರತೀಕ್ ಚೌವ್ಹಾಣ್ ಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ. ಬೀದರ್ ಜಿಲ್ಲಾ ಸತ್ರ ನ್ಯಾಯಾಲಯ ಪ್ರತೀಕ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ಪ್ರಭು ಚೌವ್ಹಾಣ್ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಬಂಧನ ಭೀತಿಯಲ್ಲಿದ್ದ ಪ್ರತೀಕ್ ಚೌವ್ಹಾಣ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತೀರ್ಪು ಇಂದಿಗೆ ಕಾಯ್ದಿರಿಸಿತ್ತು.
ಈ ನಡುವೆ ಸಂತ್ರಸ್ತೆ ಪರವಕೀಲರು ನಿರೀಕ್ಷಣಾ ಜಾಮೀನು ನೀಡದಂತೆ ತಕರಾರು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್, ಪ್ರತೀಕ್ ಚೌವ್ಹಾಣ್ ನಿರೀಕ್ಷಣ ಅಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಪ್ರತೀಕ್ ಚೌವ್ಹಾಣ್ ಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ.