Belagavi NewsBelgaum NewsKarnataka News
*ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ: ಕರವೇ ಜಿಲ್ಲಾಧ್ಯಕ್ಷ ಅಭಿಲಾಷ್ ಅವರಿಂದ ವಿಶೇಷ ಪೂಜೆ ಹಾಗೂ ಸ್ವೀಟ್ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಇಂದು ಚೆನ್ನಮ್ಮ ವೃತ್ತದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಮಾಡಿ, ಸಿಹಿ ಹಂಚುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಜಿಲ್ಲಾಧ್ಯಕ್ಷರಾದ ಅಭಿಲಾಷ್ ಅವರ ನೇತೃತ್ವದಲ್ಲಿ ಸಂಭ್ರಮಾಚಾರಣೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷರಾದ ಅಭಿಲಾಷ್ ಅವರು ಆರ್ ಸಿ ಬಿ ತಂಡ ಈ ಬಾರಿಯ ಗೆಲುವು ಕನ್ನಡಿಗರ ಗೆಲುವು, ಆರ್ ಸಿ ಬಿಅಭಿಮಾನಿಗಳ 18 ವರ್ಷಗಳ ವನವಾಸ ನೆನ್ನೆಗೆ ಅಂತ್ಯಗೊಂಡಿತು ಎಂದು ಹರ್ಷ ವ್ಯಕ್ತಪಡಿಸಿದರು.
ಈ ವೇಳೆ ಜಿಲ್ಲಾ ಪ್ರದಾನ ಕಾರ್ಯದರ್ಶಿ ರಾಜು ಗಲಗಲಿ, ಮಹಿಳಾ ಘಟಕದ ಅಧ್ಯಕ್ಷೆ ಗಿರಿಜಾ, ನಿಂಗನಗೌಡ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.