Belagavi NewsBelgaum NewsKannada NewsKarnataka NewsNationalPolitics
*ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿದ ಆರ್ಸಿಯು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯಲ್ಲಿ ಈಗಾಗಲೇ 2025-26 ನೇ ಸಾಲಿನಲ್ಲಿ ಮುಖ್ಯ ಆವರಣದಲ್ಲಿರುವ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಪ್ರಥಮ ವರ್ಷಕ್ಕೆ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು.
ಬೇರೆ ವಿದ್ಯಾರ್ಥಿಗಳಿಗೆ ಮಾದರಿ ಹಾಗೂ ಪ್ರೇರಣೆ ನೀಡುವ ದೃಷ್ಠಿಯಿಂದ ಅಗ್ರ ಶ್ರೇಯಾ ( Subject Scholar) ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಗಿರುತ್ತದೆ. ಅದರಂತೆ, ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ ಅಗ್ರ ಶ್ರೇಯಾ ( Subject Scholar) ಪ್ರಶಸ್ತಿಯನ್ನು ವಿಭಾಗಗಳಲ್ಲಿ ಓರ್ವ ವಿದ್ಯಾರ್ಥಿಗೆ ಗುರುತಿಸಿ, 23 ವಿಭಾಗಗಳ 23 ವಿದ್ಯಾರ್ಥಿಗಳಿಗೆ ತಲಾ ರೂ.5000/- ರಂತೆ ಒಟ್ಟು ರೂ, 1,15,000/-ಪ್ರೋತ್ಸಾಹ ಧನವನ್ನು ನೀಡಲಾಗಿದೆ.
ಕಾರ್ಯಕ್ರಮವು ಕುಲಪತಿಗಳ ಅಧ್ಯಕ್ಷತೆಯಲ್ಲಿ ಹಾಗೂ ಕುಲಸಚಿವರು, ಹಣಕಾಸು ಅಧಿಕಾರಿಗಳ ಎಲ್ಲ ವಿಭಾಗದ ಮುಖ್ಯಸ್ಥರುಗಳ ಉಪಸ್ಥಿತಿಯಲ್ಲಿ ಜರುಗಿತು.


