Karnataka News

*ಸರ್ಕಾರಿ ನೌಕರರ ತುರ್ತು ಗಮನಕ್ಕೆ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಕಚೇರಿ ಅಧಿಕಾರಿಗಳು, ಸಿಬ್ಬಂದಿಗಳು, ನಿಗಮಮಂಡಳಿಗಳ ನಿರ್ದೇಶನಾಯಲ, ಆಯುಕ್ತಾಯ ಸೇರಿದಂತೆ ಎಲ್ಲ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಮತ್ತೊಮ್ಮೆ ಸುತ್ತೋಲೆ ಪ್ರಕಟಿಸಿದೆ.

ಆಗಸ್ಟ್ 16ರಂದು ಈ ಬಗ್ಗೆ ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ ನಿಗಮ ಮಂಡಳಿ ನಿರ್ದೇಶನಾಲಯ, ಆಯುಕ್ತಾಲಯ ಹಾಗೂ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಸುತ್ತೋಲೆಯ ಸೂಚನೆ ಪಾಲಿಸುತ್ತಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವದ ದಿನದ ಒಳಗಾಗಿ ರಾಜ್ಯ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಇಲಾಖೆ ಸಂಖ್ಯೆಯ ಗುರುತಿನ ಚೀಟಿಗಳನ್ನು ಧರಿಸಬೇಕು.

Related Articles

‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳು ಪಟ್ಟಿಯನ್ನು ನವೆಂಬರ್ 1 ಕನ್ನಡ ರಾಜ್ಯೋತ್ವಸದ ದಿನದಿಂದ ಕಡ್ಡಾಯವಾಗಿ ಧರಿಸಬೇಕು ಎಂದು ಸರ್ಕಾರ ಮತ್ತೊಮ್ಮೆ ಸುತ್ತೋಲೆ ಪ್ರಕಟಿಸಿದೆ.

Home add -Advt

Related Articles

Back to top button