Kannada NewsKarnataka NewsLatest

*ರೀಲ್ಸ್ ಫೋಟೋಗಾಗಿ ಪ್ರೇಮಿಗಳ ಕಿರಿಕ್: ನೊಂದ ಯುವತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಯುವ ಜನತೆ ರೀಲ್ಸ್ ನಲ್ಲಿ ತೊಡಗಿಕೊಳ್ಳುವುದೇ ಹೆಚ್ಚು. ರೀಲ್ಸ್ ಫೋಟೋ ವಿಚಾರವಾಗಿ ಪ್ರೇಮಿಗಳ ನಡುವೆ ಆರಂಭವಾದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಹೊಸಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಚೈತನ್ಯ (22) ಆತ್ಮಹತ್ಯೆಗೆ ಶರಣಾದ ಯುವತಿ. ಚೈತನ್ಯ ತನ್ನ ಗೆಳೆಯನೊಂದಿಗೆ ರೀಲ್ಸ್ ಮಾಡುತ್ತಿದ್ದಳು. ಇಬ್ಬರ ನಡುವೆ ರೀಲ್ಸ್ ಫೋಟೋ ವಿಚಾರವಾಗಿ ಜಗಳ ಶುರುವಾಗಿದೆ. ಇದೇ ವಿಚಾರವಾಗಿ ಚೈತನ್ಯ ನೇಣಿಗೆ ಕೊರಳೊಡ್ಡಿದ್ದಾಳೆ.

Home add -Advt

ಯುವತಿ ಚೈತನ್ಯ ಹೊಸಹಳ್ಲಿಯಲ್ಲಿ ತನ್ನ ತಾಯಿ ಜೊತೆ ವಾಸವಾಗಿದ್ದಳು. ಮಗಳ ಸಾವಿನಿಂದ ತಾಯಿ ಕಂಗೆಟ್ಟಿದ್ದು, ಆಕ್ರಂದನ ಮುಗಿಲುಮುಟ್ಟಿದೆ.

Related Articles

Back to top button