Kannada NewsKarnataka News

*ರೇಣುಕಾಸ್ವಾಮಿ ಕೊಲೆ ಕೇಸ್: ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಪ್*

ಪ್ರಗತಿವಾಹಿನಿ ಸುದ್ದಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅಂಡ್ ಗ್ಯಾಂಗ್‌ನ 17 ಸದಸ್ಯರ ಪೈಕಿ ನಾಲ್ವರು ಆರೋಪಿಗಳನ್ನು ಇಂದು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.

ಪ್ರಕರಣದ ಆರೋಪಿಗಳಾದ  ಕಾರ್ತಿಕ್, ಕೇಶವಮೂರ್ತಿ, ರವಿಶಂಕರ್ ಹಾಗೂ ನಿಖಿಲ್ ರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. 

ಓರ್ವ ಇನ್ಸ್‌ಪೆಕ್ಟರ್‌ ಸೇರಿದಂತೆ ಹತ್ತಕ್ಕೂ ಅಧಿಕ ಮಂದಿ ಪೊಲೀಸರಿಂದ ಆರೋಪಿಗಳನ್ನು ಎಸ್ಕಾರ್ಟ್ ಮಾಡಿದ್ದು,  ತುಮಕೂರು ಕಾರಾಗೃಹದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್  ನಿಯೋಜನೆ ಮಾಡಲಾಗಿದೆ. 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button