Film & Entertainment

*ಕೋರ್ಟ್ ನಲ್ಲಿ ಪವಿತ್ರಾಗೌಡಗೆ ಭುಜತಟ್ಟಿ ಸಂತೈಸಿದ ದರ್ಶನ್*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಗ್ಯಾಂಗ್ ಇಂದು ಬೆಂಗಳೂರಿನ 52ನೇ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದೆ.

ಎಲ್ಲಾ ಆರೋಪಿಗಳಿಗೆ ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದ್ದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಹಾಗೂ ಗ್ಯಾಂಗ್ ಕೋರ್ಟ್ ಗೆ ಹಾಜರಾಗಿದ್ದು, ಈ ವೇಳೆ ನಟ ದರ್ಶ ಹಾಗೂ ಪವಿತ್ರಾಗೌಡ ಮುಖಾಮುಖಿಯಾಗಿದ್ದಾರೆ.

ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹಾಜರಾದ ಬಳಿಕ ನ್ಯಾಯಾಧೀಶರು ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿದ್ದಾರೆ. ಕೋರ್ಟ್ ನಿಂದ ಹೊರಬರುತ್ತಿದ್ದ ವೇಳೆ ಕೋರ್ಟ್ ಆವರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಮುಖಾಮುಖಿಯಾಗಿದ್ದು, ಈ ವೇಳೆ ಪವಿತ್ರಾಗೌಡ ದರ್ಶನ್ ಗೆ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ದರ್ಶನ್ ಪವಿತ್ರಾ ಗೌದಗೆ ಭುಜತಟ್ಟಿ ಸೈಂತಿಸಿದ್ದಾರೆ ಎಂದು ತಿಳಿದುಬಂದಿದೆ

Home add -Advt

Related Articles

Back to top button