
ಪ್ರಗತಿವಾಹಿನಿ ಸುದ್ದಿ, ಇಂಫಾಲ: ಮಣಿಪುರ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾಜ್ಯದ ನಾನಾ ಭಾಗಗಳಲ್ಲಿ 8 ತಾಸುಗಳ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ 40 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಈ ವಿಷಯವನ್ನು ಮಣಿಪುರ ಮುಖ್ಯಮಂತ್ರಿ ಬೀರೇನ್ ಸಿಂಗ್ ಅವರು ಈ ವಿಷಯವನ್ನು ದೃಢಪಡಿಸಿದ್ದಾರೆ. ರಾಜ್ಯದಲ್ಲಿ ಭಾನುವಾರ ನಡೆದಿದ್ದ ಗಲಭೆಯಲ್ಲಿ ಇಬ್ಬರು ಮೃತಪಟ್ಟು 12 ಜನ ಗಾಯಗೊಂಡಿದ್ದರು.
ಒಂದು ತಿಂಗಳಿಂದ ನಡೆಯುತ್ತಿರುವ ಈ ಜನಾಂಗೀಯ ಹಿಂಸಾಚಾರದಲ್ಲಿ 70ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ರಾಜ್ಯಾದ್ಯಂತ ಇಂಟರ್ ನೆಟ್ ಸಂಪರ್ಕ ಕಡಿತಗೊಳಿಸಲಾಗಿದ್ದು ಹಿಂಸಾಚಾರ ತಾರಕಕ್ಕೇರಿದ ಸ್ಥಳಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮಣಿಪುರಕ್ಕೆ ಭೇಟಿ ನೀಡಿ ಸ್ಥಿತಿಗತಿಗಳನ್ನು ಪರಿಶೀಲಿಸಲಿದ್ದಾರೆ.