Karnataka News

*ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್*

ಪ್ರಗತಿವಾಹಿನಿ ಸುದ್ದಿ : ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಮರ್ಡರ್ ಆಗಿದ್ದು,  ಅವರ ಪತ್ನಿಯೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ‌.

ಬೆಂಗಳೂರಿನ ಹೆಚ್‌ಎಸ್‌ ಆರ್ ಲೇಔಟ್‌ನಲ್ಲಿ ಇಂದು ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಮರ್ಡರ್ ನಡೆದಿದೆ. ಓಂ ಪ್ರಕಾಶ್ ಅವರ ಪತ್ನಿಯೇ ಈ ಹತ್ಯೆ ಮಾಡಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿವೆ.

ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಕೊಲೆ ಮಾಡಿದ್ದಾರಂತೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ. ಮನೆಯಲ್ಲಿ ರಕ್ತ-ಸಿಕ್ತ ಕಲೆಗಳನ್ನು ಕಂಡು ಪೊಲೀಸರೇ ಒಂದು ಕ್ಷಣ ಶಾಕ್ ಆಗಿದ್ದಾರೆ.

ಹಲವು ದಿನಗಳಿಂದ ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದ ಅವರಿಗೆ ನಿರಂತರವಾಗಿ ಚಿಕಿತ್ಸೆ ಕೊಡಿಸಲಾಗುತಿತ್ತು. ಇಂದು ದಿಢೀರ್ ಚಾಕುವಿನಿಂದ ಚುಚ್ಚಿ-ಚುಚ್ಚಿ ಅವರ ಪತ್ನಿಯೇ ಹತ್ಯೆ ಮಾಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

Home add -Advt

ಇನ್ನು ಓಂ ಪ್ರಕಾಶ್ ಅವರ ಮೃತ ದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಒಂದು ಚಾಕುವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಓಂಪ್ರಕಾಶ್ ಬೆಳಗಾವಿಯಲ್ಲಿ ಡಿಜಿ – ಐಜಿಪಿಯಾಗಿ ಕೆಲಸ ನಿರ್ವಹಿಸಿದ್ದರು.

Related Articles

Back to top button