Latest

ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯೆಲ್  ಭಾರತದ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಭಾರತದ ನೂತನ ಚುನಾವಣಾ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಸೋಮವಾರ ಅಧಿಕಾರ ಸ್ವೀಕರಿಸಿದರು.

ತ್ರಿಸದಸ್ಯ ಆಯೋಗದಲ್ಲಿ ಒಬ್ಬ ಚುನಾವಣಾ ಆಯುಕ್ತರ ಹುದ್ದೆಯು ಮೇ 15 ರಿಂದ ತೆರವಾಗಿತ್ತು. ಸುಶೀಲ್ ಚಂದ್ರ ಅವರು ಹುದ್ದೆಯಿಂದ ನಿವೃತ್ತರಾದ ನಂತರ ಅಂದಿನ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

Home add -Advt

ಗೋಯೆಲ್ ಅವರು ಶುಕ್ರವಾರದವರೆಗೆ ಭಾರೀ ಕೈಗಾರಿಕೆಗಳ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿದ್ದರು. ಸ್ವಯಂ ನಿವೃತ್ತಿ ಪಡೆದ ಅವರ ಸ್ಥಾನಕ್ಕೆ ಕ್ಯಾಬಿನೆಟ್ ನೇಮಕಾತಿ ಸಮಿತಿಯ ಆದೇಶದ ಪ್ರಕಾರ ಉತ್ತರ ಪ್ರದೇಶ ಕೇಡರ್ ಅಧಿಕಾರಿ ಕಮ್ರಾನ್ ರಿಜ್ವಿ ಅಧಿಕಾರ ವಹಿಸಿಕೊಂಡಿದ್ದರು.

2019 ರಲ್ಲಿ ಭಾರೀ ಕೈಗಾರಿಕೆಗಳ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮೊದಲು, ಗೋಯೆಲ್ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿಯಾಗಿದ್ದರು. ಅವರು ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಶಾಸಕನ ಬಟ್ಟೆ ಹರಿದು ಹಲ್ಲೆ; 10 ಜನರ ಬಂಧನ

Related Articles

Back to top button