LatestUncategorized

*ಕಾಲೇಜಿನಲ್ಲಿಯೇ ವಿದ್ಯಾರ್ಥಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕಾಲೇಜೊಂದರಲ್ಲಿ ವಿದ್ಯಾರ್ಥಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಗುಜರಾತ್ ಮೂಲದ ಭಾಸ್ಕರ ಜೆಟ್ಟಿ (22) ಮೃತ ವಿದ್ಯಾರ್ಥಿ. ಮೆಕಾನಿಕಲ್ ಇಂಜಿನಿಯರ್ ಆಗಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜಿ ಫೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ವಿದ್ಯಾರ್ಥಿಯನ್ನೇ ಹತ್ಯೆ ಮಾಡಲಾಗಿದೆ.

ವಿದ್ಯಾರ್ಥಿ ಭಾಸ್ಕರ್ ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದೆ. ಭಾಸ್ಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಾಗಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://pragati.taskdun.com/b-v-shrinivasanticipatory-bail-pleadismissyouth-congress-president/

Home add -Advt

Related Articles

Back to top button