*ಬೆಳಗಾವಿ ಬಳಿ ಭೀಕರ ಅಪಘಾತ: ರಾಜುಗೌಡ ಪಾಟೀಲ ಸಾವು*

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರೇಬಾಗೇವಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಖಾನಾಪುರ ತಾಲ್ಲೂಕಿನ ಅವರೋಳ್ಳಿ ಗ್ರಾಮದ ನಿವಾಸಿ ಹಾಗೂ ಕೊಡಚವಾಡ ಗ್ರಾಮ ಪಂಚಾಯಿತಿಯ ನಾಲ್ಕು ಬಾರಿ ಸದಸ್ಯರಾಗಿದ್ದ ರಾಜುಗೌಡ ಪಾಟೀಲ ಅವರು ಅಪಘಾತದಲ್ಲಿ ಮೃತಪಟ್ಟವರು. ಅವರು ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು. ಮಾಹಿತಿಯಂತೆ, ರಾಜುಗೌಡ ಪಾಟೀಲ ಅವರು ಮಂಗಳವಾರ … Continue reading *ಬೆಳಗಾವಿ ಬಳಿ ಭೀಕರ ಅಪಘಾತ: ರಾಜುಗೌಡ ಪಾಟೀಲ ಸಾವು*