Karnataka NewsLatest

50 ಲಕ್ಷ ರೂ. ಅನುದಾನದಲ್ಲಿ ಸಾಂಬ್ರಾದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಲೂಕಿನ ಸಾಂಬ್ರಾ ಗ್ರಾಮದ ಗಣೇಶ ನಗರದ ವ್ಯಾಪಿಯಲ್ಲಿ ಬರುವ ಎಲ್ಲ ಗಲ್ಲಿಗಳ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಸಲುವಾಗಿ 50 ಲಕ್ಷ ರೂ. ಅನುದಾನವನ್ನು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಮಂಜೂರು ಮಾಡಿಸಿದ್ದು ಈ ಅನುದಾನದ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಮೊದಲು 80 ಲಕ್ಷ ರೂ.ಗಳನ್ನು ಮಂಜೂರು ಮಾಡಿಸಿ, ರಸ್ತೆ ಕಾಮಗಾರಿಗಳಿಗೆ ಚಾಲನೆ  ನೀಡಲಾಗಿತ್ತು, ಇಂದು ಬಾಕಿ ಉಳಿದ ರಸ್ತೆಗಳ ಮಾಹಿತಿಯನ್ನು ಕಲೆ ಹಾಕಿ ಈ ಎಲ್ಲ ರಸ್ತೆಗಳ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಒಟ್ಟಾರೆಯಾಗಿ 1.30 ಕೋಟಿ ರೂ,ಗಳ ವೆಚ್ಚದಲ್ಲಿ ಈ ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಗ್ರಾಮದ ಹಿರಿಯರು, ಆಯಾ ಗಲ್ಲಿಗಳ ನಿವಾಸಿಗಳು, ನಾಗೇಶ ದೇಸಾಯಿ, ಸ್ಥಳೀಯ ಜನಪ್ರತಿನಿಧಿಗಳು, ಆಪ್ತ ಸಹಾಯಕರು, ಪಕ್ಷದ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

108 ಅಡಿ ಎತ್ತರದ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button