Kannada NewsKarnataka NewsLatest

*ಹಾಡಹಗಲೇ ಚಿನ್ನದ ಮಳಿಗೆಗೆ ನುಗ್ಗಿದ ದರೋಡೆಕೋರರ ಗ್ಯಾಂಗ್: ಸಿಬ್ಬಂದಿಗಳಿಗೆ ಗನ್ ಇಟ್ಟು ಬೆದರಿಸಿ ಲೂಟಿ*

ಪ್ರಗತಿವಾಹಿನಿ ಸುದ್ದಿ: ಹಾಡಹಗಲೇ ರಾಜ್ಯದಲ್ಲಿ ಮತ್ತೊಂದು ದರೋಡೆ ನಡೆದಿದೆ. ಗನ್ ಹಿಡಿದು ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರ ಗ್ಯಾಂಗ್ ಅಪಾರ ಪ್ರಮಾಣದ ಚಿನ್ನಾಭರಣ ದೋಚಿ ಪಾರಾರಿಯಾಗಿದೆ.

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಈ ಘಟನೆ ನಡೆದಿದೆ. ಸ್ಕೈ ಗೋಲ್ಡ್ ಆಂಡ್ ಡೈಮಂಡ್ ಚಿನ್ನಾಭರಣ ಮಳಿಗೆಗೆ ಮಧ್ಯಾಹ್ನ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರ ಗ್ಯಾಂಗ್, ಸಿಬ್ಬಂದಿಗಳಿಗೆ ಗನ್ ಇಟ್ಟು ಬೆದರಿಸಿದ್ದಾರೆ ಗಾಳಿಯಲ್ಲಿ ಗುಂಡು ಹೊಡೆದು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

Home add -Advt

ವಿಷಯ ತಿಳಿಯುತ್ತಿದ್ದಂತೆ ಹುಣಸೂರು ಪೊಲೀಸರು ಮಳಿಗೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಚಿನ್ನಾಭರಣ ಕದ್ದು ಕಳ್ಳರು ಬೈಕ್ ನಲ್ಲಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ದರೋಡೆಕೋರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


Related Articles

Back to top button