
ಪ್ರಗತಿವಾಹಿನಿ; ಗದಗ –
ನಗರದ ಹೊರವಲಯದಲ್ಲಿರುವ ಬಿಂಕದಕಟ್ಟಿ ಮೃಗಾಲಯದ ಪ್ರಾಣಿಪಾಲಕ ಮೃತ್ಯುಂಜಯ ಹಿರೇಮಠ ಅವರಿಗೆ ಮೊಸಳೆ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ. ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿರುವ ಮೃತ್ಯುಂಜಯ ಅವರು ಶನಿವಾರ ಮೊಸಳೆ ಮನೆ ಸ್ವಚ್ಛಗೊಳಿಸಲು ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಮೊಸಳೆ ಮನೆ ಸ್ವಚ್ಛಗೊಳಿಸುತ್ತಿದ್ದ ವೇಳೆ ಮೃತ್ಯುಂಜಯ ಅವರ ಮೇಲೆ ದಾಳಿ ನಡೆಸಿದ ಮೊಸಳೆ ಅವರ ತಲೆಗೆ ಕಚ್ಚಿ ಗಾಯಗೊಳಿಸಿದೆ. . ಈ ವೇಳೆ ಅಲ್ಲಿಯೇ ಇದ್ದ ಇತರೆ ಸಿಬ್ಬಂದಿ ಮೊಸಳೆಗೆ ಕಟ್ಟಿಗೆಯಿಂದ ಬಡಿದು, ಮೃತ್ಯುಂಜಯ ಅವರನ್ನು ಬಿಡಿಸಿದ್ದಾರೆ.
ಗಾಯಾಳುವಿಗೆ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ನೀಡಿ ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.