GamesSports

*ಪಂದ್ಯ ರದ್ದಾದರು ಅಗ್ರಸ್ಥಾನಕ್ಕೇರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು*

ಪ್ರಗತಿವಾಹಿನಿ ಸುದ್ದಿ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಳೆಯಿಂದಾಗಿ RCB vs KKR ತಂಡದ ನಡುವಿನ ಪಂದ್ಯ ರದ್ದಾಗಿದೆ. 

ಪಂದ್ಯ ರದ್ದಾದ ಕಾರಣ RCB & KKR ತಂಡಗಳು ತಲಾ ಒಂದೊಂದು ಪಾಯಿಂಟ್ ಗಳನ್ನು ಹಂಚಿಕೊಂಡಿದ್ದು ಆ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸದ್ಯ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಆದರೆ ಕೋಲ್ಕತ್ತಾ ತಂಡ ಪ್ಲೇ ಆಫ್ ನಿಂದ ಹೊರಬಿದ್ದಿದೆ.

ಆರ್‌ಸಿಬಿ ತಂಡ‌ ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯರೆಗೂ ಆಡಿರುವ ಒಟ್ಟು 11 ಪಂದ್ಯಗಳ ಪೈಕಿ 8 ಪಂದ್ಯಗಳಲ್ಲಿ ಗೆದ್ದು ಕೇವಲ 3 ಪಂದ್ಯಗಳಲ್ಲಿ ಸೋಲನ್ನು ಕಂಡು 16 ಅಂಕಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿತ್ತು. ಅತ್ತ 12 ಪಂದ್ಯಗಳನ್ನಾಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿದ್ದು 1 ಪಂದ್ಯ ಫಲಿತಾಂಶವಿಲ್ಲದೇ ಅಂತ್ಯಗೊಂಡಿತ್ತು.

Home add -Advt

Related Articles

Back to top button