
ಪ್ರಗತಿವಾಹಿನಿ ಸುದ್ದಿ; ಉತ್ತರಾಖಂಡ: ಭಾರಿ ಮಳೆಯಿಂದಾಗಿ ರುದ್ರಪ್ರಯಾಗದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, 10 ಜನರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ರುದ್ರಪ್ರಯಾಗದಲ್ಲಿ ಅಂಗಡಿಯ ಬಳಿ ಭೂಕುಸಿತ ಸಂಭವಿಸಿದ್ದು, ಅಂಗಡಿಯ ಮೇಲೆಯೇ ಬೃಹತ್ ಬಂಡೆಗಳು ಕುಸಿದು ಬಿದ್ದಿವೆ. ಮೂರು ಅಂಗಡಿಗಳು ಸಂಪೂರ್ಣ ಹಾನಿಯಾಗಿದ್ದು, ಘಟನೆ ವೇಳೆ 10-12 ಜನರು ಅಂಗಡಿಯಲ್ಲಿದ್ದರು. ಹತ್ತು ಜನರು ನಾಪತ್ತೆಯಾಗಿದ್ದು, ಈವರೆಗೂ ಸುಳಿವು ಸಿಕ್ಕಿಲ್ಲ.
ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ಇದ್ದು, ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ