Kannada NewsLatestNational

*ಭೂಕುಸಿತ: 10 ಜನರು ನಾಪತ್ತೆ*

ಪ್ರಗತಿವಾಹಿನಿ ಸುದ್ದಿ; ಉತ್ತರಾಖಂಡ: ಭಾರಿ ಮಳೆಯಿಂದಾಗಿ ರುದ್ರಪ್ರಯಾಗದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, 10 ಜನರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ರುದ್ರಪ್ರಯಾಗದಲ್ಲಿ ಅಂಗಡಿಯ ಬಳಿ ಭೂಕುಸಿತ ಸಂಭವಿಸಿದ್ದು, ಅಂಗಡಿಯ ಮೇಲೆಯೇ ಬೃಹತ್ ಬಂಡೆಗಳು ಕುಸಿದು ಬಿದ್ದಿವೆ. ಮೂರು ಅಂಗಡಿಗಳು ಸಂಪೂರ್ಣ ಹಾನಿಯಾಗಿದ್ದು, ಘಟನೆ ವೇಳೆ 10-12 ಜನರು ಅಂಗಡಿಯಲ್ಲಿದ್ದರು. ಹತ್ತು ಜನರು ನಾಪತ್ತೆಯಾಗಿದ್ದು, ಈವರೆಗೂ ಸುಳಿವು ಸಿಕ್ಕಿಲ್ಲ.

ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ಇದ್ದು, ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button