Kannada NewsKarnataka NewsLatestPolitics

*ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಲಾಭ ಪಡೀತಿಲ್ವಾ? ಸಿಎಂ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ನಾವು ಎಲ್ಲ ಜಾತಿ, ಎಲ್ಲಾ ಧರ್ಮದವರಿಗೆ ಮಾತ್ರವಲ್ಲ ಎಲ್ಲಾ ಪಕ್ಷದವರಿಗೂ ಅನುಕೂಲ ಆಗುವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಬಿಜೆಪಿಯವರು ಸರ್ಕಾರದ ಯೋಜನೆಗಳ ಲಾಭ ಪಡೆಯುತ್ತಿಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Home add -Advt

ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು 10 ಕೆಜಿ ಅಕ್ಕಿ ಪಡೆಯುತ್ತಿಲ್ಲವಾ ? ಬಿಜೆಪಿಯವರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿಲ್ಲವೇ ? ಬಿಜೆಪಿಯವರು ಗೃಹಜ್ಯೋತಿ, ಗೃಹಲಕ್ಷ್ಮಿ ಯ ಹಣ ಪಡೆಯುತ್ತಿಲ್ಲವೇ ? ನಮ್ಮ ಗ್ಯಾರಂಟಿ ಸ್ಕೀಂ ಗಳ ಲಾಭ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಸುಳ್ಳು ಹೇಳುವವರ, ನಮ್ಮ ಸರ್ಕಾರದ ಲಾಭ ಪಡೆದೂ ನಕ್ರಾ ಆಡುವವರ ಜತೆ ಹೋಗಬೇಡಿ ಎಂದರು.

ಉಡುಪು ಅವರವರ ಇಷ್ಟ:
ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದೀನಿ ಎಂದು ಇದೇ ವೇಳೆ ಮುಖ್ಯಮಂತ್ರಿಗಳು ತಿಳಿಸಿದರು.


Related Articles

Back to top button