Latest

ಮಾಜಿ ಶಾಸಕ ಎಸ್.ಕೆ.ಬಸವರಾಜನ್ ದಂಪತಿಗೆ ಜಾಮೀನು ಮಂಜೂರು

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಅತ್ಯಾಚಾರ ಯತ್ನ ಹಾಗೂ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ದಂಪತಿಗೆ ಚಿತ್ರದುರ್ಗ ಸೆಷನ್ ನ್ಯಾಯಾಲಯ ನಿರೀಕ್ಷನಾ ಜಾಮೀನು ಮಂಜೂರು ಮಾಡಿದೆ.

ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯೂ ಆಗಿದ್ದ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಹಾಗೂ ಅವರ ಪತಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಸೌಭಾಗ್ಯ ಅವರಿಗೆ ನ್ಯಾಯಾಲಯ ನಿರೀಕ್ಷಣ ಅಜಾಮೀನು ಮಂಜೂರು ಮಾಡಿದೆ.

ಬಸವರಾಜನ್ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ಐಪಿಸಿ ಸೆಕ್ಷನ್ 341, 342, 504 ಅಡಿ ಪ್ರಕರಣ ದಾಖಲಾಗಿತ್ತು.

ಅತ್ಯಾಚಾರ ಯತ್ನ ಪ್ರಕರಣ; ಜಾಮೀನಿಗಾಗಿ ಕೋರ್ಟ್ ಮೊರೆ ಹೋದ ಮಾಜಿ ಶಾಸಕ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button