Latest

*ಎಸ್.ಎಂ.ಕೃಷ್ಣ ಸಂಬಂಧಿಕರ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣೆ ಹೊತ್ತಲ್ಲೇ ರಾಜಕೀಯ ನಾಯಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಾಜ್ಯದ ಹಲವೆಡೆ ಕಳೆದ ಮೂರು ದಿನಗಳಿಂದ ಸಾಲು ಸಾಲು ರಾಜಕೀಯ ಮುಖಂಡರು, ಅವರ ಆಪ್ತರು, ಸಂಬಂಧಿಕರ ಮನೆ ಮೇಲೆ ದಾಳಿ ನಡೆಸಿರುವ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಹೋದರಿ ಸುನೀತಾ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಕೋರಮಂಗಲದ 1ನೇ ಬ್ಲಾಕ್ ನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿರುವ ಐಟಿ ಇಲಾಖೆಯ 8 ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ.

ಇನ್ನು ಬಾಗ್ಮನೆ ಹೆಸರಿನ ನಿವಾಸ, ಬಾಗ್ಮನೆ ಬಿಲ್ಡರ್ಸ್, ಟ್ರಾನ್ ಇನ್ಸೈನಿಯಾ ಅಪಾರ್ಟ್ ಮೆಂಟ್ ಗಳ ಮೇಲೂ ಐಟಿ ದಾಳಿ ನಡೆದಿದೆ.

Home add -Advt
https://pragati.taskdun.com/it-raidcongress-leaderskalaburgihaveri/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button