Kannada NewsKarnataka NewsLatestUncategorized

*ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ, ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನ ಮಂಜುನಾಥ ನಗರದಲ್ಲಿರುವ ನಿವಾಸದಲ್ಲಿ ಇಂದು ಸಂಜೆ ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ ಅವರ ಬೆನ್ನು ಮೂಳೆಗೆ ಪೆಟ್ಟಾಗಿದೆ. ಈ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ತುಮಕೂರಿನ ಗುಬ್ಬಿ ಮೂಲದ ತಿಮ್ಮಕ್ಕ ಪರಿಸರದ ಮೇಲಿನ ಅಪಾರ ಪ್ರೀತಿಯಿಂದ ಗಿಡಗಳನ್ನು ನೆಟ್ಟು ಬೆಳೆಸಿದ್ದು, ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತಿ ಪಡೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button