*ಶ್ರೀಗಂಧ ಕಳ್ಳನ ಬಂಧನ*

ನಾಗರಗಾಳಿ ಅರಣ್ಯಾಧಿಕಾರಿಗಳ ಕಾರ್ಯಾಚರಣೆ ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ನಾಗರಗಾಳಿ ವಲಯದ ಅರಣ್ಯಾಧಿಕಾರಗಳು ಮತ್ತು ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ನಡೆಸಿದ ಮಿಂಚಿನ ದಾಳಿಯಲ್ಲಿ ಶ್ರೀಗಂಧವನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲುಸಮೇತ ಹಿಡಿದು ನ್ಯಾಯಾಂಗ ವಶಕ್ಕೆ ಒಪ್ಪಿಸಿದ ಘಟನೆ ಮಂಗಳವಾರ ಜರುಗಿದೆ. ತಾಲೂಕಿನ ನಾಗರಗಾಳಿ ಅರಣ್ಯದಲ್ಲಿ ಸ್ವಾಭಾವಿಕವಾಗಿ ಬೆಳೆದಿದ್ದ ಶ್ರೀಗಂಧದ ಗಿಡವೊಂದನ್ನು ಬೇರು ಸಮೇತ ಕಡಿದು ಸಾಗಿಸುತ್ತಿರುವ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ದೊರೆತ ಕೂಡಲೇ ಕಾರ್ಯಪ್ರವೃತ್ತರಾದ ನಾಗರಗಾಳಿ ಎಸಿಎಫ್ ಶಿವಾನಂದ ಮಗದುಮ್, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ … Continue reading *ಶ್ರೀಗಂಧ ಕಳ್ಳನ ಬಂಧನ*