Kannada NewsKarnataka NewsLatest

*ಮನೆ ಮೇಲ್ಛಾವಣಿ ಕುಸಿದು ಓರ್ವ ದುರ್ಮರಣ; ಮೂವರು ಮಕ್ಕಳ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಮನೆ ಮೇಲ್ಛಾವಣಿ ಕುಸಿದು ಬಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ (60) ಮೃತರು. ಘಟನೆಯಲ್ಲಿ ಮೂವರು ಮಕ್ಕಳಿಗೆ ಗಂಭೀರ ಗಾಯಗಲಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳಾದ ಕೀರ್ತಿ, ಲಕ್ಷ್ಮೀ, ಮುತ್ತುರಾಜ್ ಗಾಯಾಳುಗಳು. ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Home add -Advt

Related Articles

Back to top button