Latest

*ಸ್ಯಾಂಟ್ರೋ ರವಿ ವಿರುದ್ಧ EDಗೆ ದೂರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಸ್ಯಾಂಟ್ರೋ ರವಿ ವಿರುದ್ಧ ಜಾರಿ ನಿರ್ದೇಶನಾಲಯ (ED)ಕ್ಕೆ ದೂರು ನೀಡಲಾಗಿದೆ.

ಸ್ಯಾಂಟ್ರೋ ರವಿ ವಿರುದ್ಧ ಮೈಸೂರಿನ ಒಡನಾಡಿ ಸಂಸ್ಥೆ ಇಡಿಗೆ ದೂರು ನೀಡಿದೆ. ಈ ಬಗ್ಗೆ ಒಡನಾಡಿ ಸಂಸ್ಥೆಯ ಸದಸ್ಯ ಪರಶುರಾಮ್ ಮಾಹಿತಿ ನೀಡಿದ್ದು, ಅಕ್ರಮವಾಗಿ ಹಣ, ಸೈಟ್ ಸಂಪಾದನೆ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ದೂರು ದಾಖಲಿಸಿದ್ದೇವೆ ಎಂದು ತಿಲಿಸಿದ್ದಾರೆ.

ಎರಡು ಕಂಪನಿಗಳ ಮೂಲಕ ಹವಾಲಾ ಹಣ ವರ್ಗಾವಣೆಯಾಗಿದೆ. ತನ್ನ ಆರ್ಥಿಕ ಅಪರಾಧಗಳಿಗಾಗಿ ಕುಮಾರಕೃಪಾ ದುರ್ಬಳಕೆ ಮಾಡಿದ್ದಾನೆ ಈ ಎಲ್ಲಾ ಕಾರಣಗಳಿಂದಾಗಿ ಇಡಿಗೆ ದೂರು ನೀಡಿದ್ದೇವೆ. ಇಡಿ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮತ್ತಷ್ಟು ದಾಖಲೆಗಳನ್ನು ನೀಡುವಂತೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

*BREAKING NEWS: ಕೋಲಾರದಿಂದ ಸ್ಪರ್ಧೆಗೆ ತೀರ್ಮಾನ: ಸಿದ್ದರಾಮಯ್ಯ ಅಧಿಕೃತ ಘೋಷಣೆ*

Home add -Advt

https://pragati.taskdun.com/vidhanasabha-election-2023siddaramiahkolaracontestannounce/

Related Articles

Back to top button