
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನಿರಂತರ ಪ್ರಚಾರದಲ್ಲಿ ತೊಡಗಿದ್ದಾರೆ.

ಸಂತಿ ಬಸ್ತವಾಡ ಗ್ರಾಮದಲ್ಲಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳ ಜನ ಪ್ರತಿನಿಧಿಗಳ, ಕಾರ್ಯಕರ್ತರುಗಳ ಹಾಗೂ ಸಾರ್ವಜನಿಕರ ಸಭೆ ನಡೆಸಿದ ಹೆಬ್ಬಾಳಕರ್, ಸತೀಶ್ ಜಾರಕಿಹೊಳಿ ಅವರನ್ನು ಲಕ್ಷಾಂತರ ಮತಗಳಿಂದ ಗೆಲ್ಲಿಸಿ ತರಬೇಕೆಂದು ವಿನಂತಿಸಿದರು.
ಸತೀಶ್ ಜಾರಕಿಹೊಳಿ ಅವರು ದೂರದೃಷ್ಟಿಯ ನಾಯಕರಾಗಿದ್ದು, ಅವರ ಆಚಾರ, ವಿಚಾರಗಳು ಇಂದಿನ ಸಮಾಜದಲ್ಲಿ ಅತ್ಯಂತ ಪ್ರಭಾವವನ್ನು ಬೀರಿವೆ. ಈ ಪ್ರಭಾವಗಳು ರಾಜ್ಯ ಮಟ್ಟಕ್ಕೆ ಮಾತ್ರ ಸೀಮಿತವಾಗಬಾರದು, ಸತೀಶಣ್ಣನವರ ವರ್ಚಸ್ಸನ್ನು ಹಳ್ಳಿಯಿಂದ ದಿಲ್ಲಿಯವರೆಗೆ ಪರಿಚಯಿಸಬೇಕಾಗಿದೆ, ಇದಕ್ಕೋಸ್ಕರ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಸತೀಶಣ್ಣನವರ ನಾಯಕತ್ವ, ನಿಸ್ವಾರ್ಥ ಸೇವೆ, ಸಮಾಜಮುಖಿ ಕಾರ್ಯಗಳು ನಮ್ಮೆಲ್ಲರಿಗೂ ಮಾರ್ಗದರ್ಶಕ. ಅವರೊಬ್ಬ ಶಾಂತಿ, ಸಂಯಮ ಹಾಗೂ ಶಿಸ್ತಿನ ಸಿಪಾಯಿ. ಯಾವಾಗಲೂ ಸಮಾಜದ ಬೆಳವಣಿಗೆಗಾಗಿ ಹಂಬಲಿಸುವ ಶ್ರಮಜೀವಿ. ಇಂತಹ ಶ್ರಮಜೀವಿಯನ್ನು ಬೆಂಬಲಿಸಿ ಲೋಕಸಭೆಗೆ ಆರಿಸಿ ಕಳಿಸೋಣ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.

ಲೋಕಸಭಾ ಉಪ ಚುನಾವಣೆಯ ಪ್ರಕ್ರಿಯೆ ಆರಂಭವಾದ ನಂತರ ಅನೇಕರ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿ ಸೇರ್ಪಡೆಯಾಗಿದ್ದಾರೆ.
ನರೇಗಾ ಕಾರ್ಮಿಕರ ಬೆಂಬಲ

ಅವರನ್ನು ಪ್ರಚಂಡ ಬಹುಮತಗಳಿಂದ ಆರಿಸಿ ತಂದು ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕೆಲಸಗಳಿಗೆ ಕಾರಣರಾಗೋಣ.

ಮೃಣಾಲ ಹೆಬ್ಬಾಳಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.