Kannada NewsLatestNationalPolitics
*ಸತೀಶ್ ಜಾರಕಿಹೊಳಿ ಮೇಲೆ ದಾಳಿ: ಇಡಿ ಅಧಿಕಾರಿಗಳು ಇದನ್ನು ದೊಡ್ಡ ಸಾಧನೆಯಂತೆ ಬಿಂಬಿಸುತ್ತಿವೆ : ವಿಜಯ್ ಮಲ್ಯ ಕಿಡಿ*

ಪ್ರಗತಿವಾಹಿನಿ ಸುದ್ದಿ: ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಇಡಿ ಅಧಿಕಾರಿಗಳು ಬಿಡುಗಡೆ ಮಾಡಿದ ದಾಖಲೆಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವಿಜಯ್ ಮಲ್ಯ, ಇಡಿ ಅಧಿಕಾರಿಗಳು ಇದನ್ನು ದೊಡ್ಡ ಸಾಧನೆಯಂತೆ ಬಿಂಬಿಸುತ್ತಿವೆ ಎಂದು ಟೀಕಿಸಿದ್ದಾರೆ.
ಇಡಿ ದಾಳಿಯ ನಂತರ ಯಾವುದೇ ದೋಷಾರೋಪ ಪಟ್ಟಿ ಇಲ್ಲ, ವಿಚಾರಣೆಯೂ ಇಲ್ಲ, ಏಕಾಏಕಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಇದು ಸಾರ್ವಜನಿಕವಾಗಿ ಮಾಡುತ್ತಿರುವ ಕೇವಲ ವ್ಯಕ್ತಿತ್ವ ಹನನ ಎಂದು ಕಿಡಿಕಾರಿದ್ದಾರೆ.
ಬೇರೆ ಯಾವುದೇ ದೇಶದಲ್ಲಿ ಇಂತಹ ಘಟನೆಗಳು ನಡೆಯುವುದಿಲ್ಲ. ದಯವಿಟ್ಟು ನೀವೇ ಸ್ವತಃ ಯೋಚಿಸಿ ನೋಡಿ ಎಂದು ಸಾರ್ವಜನಿಕರಿಗೆ ಮಲ್ಯ ಮನವಿ ಮಾಡಿದ್ದಾರೆ.




