
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೊಂದಿಗೆ ಇಂದು ಮೊದಲ ಹಂತದಲ್ಲಿ 8 ಜನರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಹೊಸಬರಿಗೆ ಸಂಪುತದಲ್ಲಿ ಅವಕಾಶ ನೀಡುವಂತೆ ಸಲಹೆ ನೀಡುತ್ತೇನೆ. ಮೊದಲ ಹಂತದಲ್ಲಿ 8 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎರಡು ಹಾಗೂ ಮೂರನೇ ಹಂತದಲ್ಲಿ ಉಳಿದ ಸ್ಥಾನ ಭರ್ತಿ ಮಾಡುತ್ತೇವೆ. ಕನಿಷ್ಠ 10ಮಂದಿಗಾದರೂ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎಂದರು.
ಮೊದಲ ಸಂಪುಟದಲ್ಲಿಯೇ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ತಿಳಿಸಿದರು.