Kannada NewsKarnataka NewsLatest

*ಕಾಲೇಜು ಬಸ್ ಡಿಕ್ಕಿ: ತಾಯಿ-ಮಗ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಮಗನನ್ನು ಶಾಲೆಗೆ ಬಿಡಲು ಕರೆದೊಯ್ಯುತ್ತಿದ್ದಾಗ ಬಸ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಇಬ್ಬರು ಸ್ಥಳದಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ತಾಯಿ ಸಂಗೀತಾ(37) ಹಾಗೂ ಮಗ ಪಾರ್ಥ (8) ಮೃತ ದುರ್ದೈವಿ. ಸಂಗೀತಾ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಪತಿ ಪ್ರಸಾದ್ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದರು.

Home add -Advt

ಇಂದು ಬೆಳಿಗ್ಗೆ ಮಗನೊಂದಿಗೆ ಶಾಲೆಗೆ ತೆರಳುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಕಾಅಲೇಜಿನ ಬಸ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ತಾಯಿ-ಮಗ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ನೆರೆದಿರುವ ಸಾರ್ವಜನಿಕರು ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಶೋಕ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button