Uncategorized

*ಶಾಲಾ-ಕಾಲೇಜುಗಳಿಗೆ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮಳೆ ಹಾಗೂ ಕೇರಳ ರಾಜ್ಯದಲ್ಲಿ ಜ್ವರ, ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಆರೋಗ್ಯ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ.

ಕೇರಳದಲ್ಲಿ ಪ್ರತಿ ದಿನ 10 ಸಾವಿರ ಜ್ವರದ ಪ್ರಕರಣಗಳು ಪತ್ತೆಯಾಗುತ್ತಿವೆ. ಚಿಕೂನ್ ಗುನ್ಯಾ, ಡೆಂಘೀ, ಹಕ್ಕಿ ಜ್ವರ, ಹೆಚ್1 ಎನ್1 ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಆರೋಗ್ಯ ಇಲಾಖೆ ಶಾಲಾ-ಕಾಲೆಜುಗಳಿಗೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸುವಂತೆ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು, ದಕ್ಷಿಣ ಕನ್ನಡ, ಕೊಡಗು, ಉಡುಪಿ, ಕಾಸರಗೋಡು ಗಡಿ ಭಾಗಗಳ ಶಾಲೆ-ಕಾಲೇಜುಗಳಲ್ಲಿ ಕಟ್ಟೆಚ್ಚರವಸುವಂತೆ ಸೂಚನೆ ನೀಡಿದೆ.

ಕೇರಳ ರಾಜ್ಯದಲ್ಲಿ ಜ್ವರದ ಪ್ರಕರಣ ಹೆಚ್ಚುತ್ತಿರುವುದರಿಂದ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಆರೋಗ್ಯ ಇಲಾಖೆ ಸಚಿವರ ಸಭೆ ಕರೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button