Kannada NewsKarnataka News

ವಿದ್ಯಾಭಾರತಿ ರಾಜ್ಯಾಧ್ಯಕ್ಷರಾಗಿ ಪರಮೇಶ್ವರ ಹೆಗಡೆ

ವಿದ್ಯಾಭಾರತಿ ರಾಜ್ಯಾಧ್ಯಕ್ಷರಾಗಿ ಪರಮೇಶ್ವರ ಹೆಗಡೆ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –

ಬೆಳಗಾವಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಪರಮೇಶ್ವರ ಹೆಗಡೆ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ವಿದ್ಯಾಭಾರತಿಯ 2 ದಿನಗಳ ಸರ್ವಸಾಧಾರಣ ಸಭೆ ಬೆಳಗಾವಿಯ ಸಂತಮೀರಾ ಶಾಲೆಯಲ್ಲಿ ಸೆಪ್ಟಂಬರ್ 8 ಮತ್ತು 9 ರಂದು ನಡೆಯಿತು. ಸಭೆಯಲ್ಲಿ ಪರಮೇಶ್ವರ ಹೆಗಡೆ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆಯ ಮಾಡಲಾಯಿತು.

Home add -Advt

ಅಖಿಲ ಭಾರತ ಮಟ್ಟದ ಸರಕಾರೇತರ ಸ್ವಯಂ ಸೇವಾ ಸಂಸ್ಥೆಯಾಗಿರುವ ವಿದ್ಯಾಭಾರತಿ ರಾಷ್ಟ್ರಾದ್ಯಂತ ಸುಮಾರು 26 ಸಾವಿರ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿದೆ. ಕರ್ನಾಟಕದ 15 ಜಿಲ್ಲಾಗಳಲ್ಲಿ 450ಕ್ಕೂ ಹೆಚ್ಚು ಶಾಲೆಗಳನ್ನು ನಡೆಸುತ್ತಿದೆ.

Related Articles

Back to top button