Kannada NewsKarnataka NewsLatest

*ಮಾಜಿ ಮೇಯರ್ ಮನೆಯಲ್ಲಿ 1.30 ಕೋಟಿ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾದ ಸೆಕ್ಯೂರಿಟಿ ಗಾರ್ಡ್*

ಪ್ರಗತಿವಾಹಿನಿ ಸುದ್ದಿ: ನೇಪಾಳ ಮೂಲದ ವ್ಯಕ್ತಿ ಸೆಕ್ಯೂರಿಟಿ ಗಾರ್ಡ್ ಆಗಿ ಮಾಜಿ ಮೇಯರ್ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡು ಸಮಯ ನೋಡಿ ಮನೆಯಲ್ಲಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ.‌

ಮನೆಗೆ ಕಾವಲಾಗಬೇಕಿದ್ದ ಸೆಕ್ಯೂರಿಟಿ ಗಾರ್ಡ್ ಅದೇ ಮನೆಯಲ್ಲಿ ಚಿನ್ನ, ಬೆಳ್ಳಿ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಾಜಿ ಮೇಯರ್, ಬಿಜೆಪಿ ಮುಖಂಡ ಆರ್.ನಾರಾಯಣಸ್ವಾಮಿ ಮನೆಯಲ್ಲಿ ಈ ಘಟನೆ ನಡೆದಿದೆ. ನಾರಾಯಣಸ್ವಾಮಿ ಚುನಾವಣೆ ಪ್ರಚಾರಕ್ಕೆ ಹೋಗಿದ್ದರು. ಮಗ, ಪತ್ನಿ ತಮಿಳುನಾಡಿನ ದೇವಾಲಯಕ್ಕೆ ಹೋಗಿದ್ದರು. ಇದೇ ಸಮಯವನ್ನ  ಬಳಸಿಕೊಂಡು ಸೆಕ್ಯೂರಿಟಿ ಗಾರ್ಡ್ ಮನೆಯಲ್ಲಿದ್ದ 1.30 ಕೋಟಿ ಮೌಲ್ಯದ ಚಿನ್ನಾಭರಣ ಕದ್ದು ಓಡಿ ಹೋಗಿದ್ದಾನೆ. ಈ ಕುರಿತು ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ

Related Articles

Back to top button