Kannada NewsKarnataka NewsLatest
*ಮೀನು ಹಿಡಿಯಲು ಹೋದಾಗ ದುರಂತ; ಇಬ್ಬರು ನೀರು ಪಾಲು*

ಪ್ರಗತಿವಾಹಿನಿ ಸುದ್ದಿ: ಮೀನು ಹಿಡಿಯಲೆಂದು ನದಿಗೆ ಇಳಿದಿದ್ದ ಇಬ್ಬರು ಸೀತಾ ನದಿ ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದಲ್ಲಿ ನಡೆದಿದೆ.
ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತ ದುರ್ದೈವಿಗಳು. ನದಿಯಲ್ಲಿ ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರೂ ನೀರುಪಾಲಾಗಿ ಸಾವನ್ನಪ್ಪಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




