Latest

20 ಲಕ್ಷ ಕೋಟಿ ರೂ ವಿಶೇಷ ಪ್ಯಾಕೇಜ್ ನ ಎರಡನೇ ಹಂತದ ವಿವರಣೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ; ಪ್ರಧಾನಿ ಮೋದಿ ಘೋಷಿಸಿದ್ದ 20 ಲಕ್ಷ ಕೋಟಿ ರೂ ವಿಶೇಷ ಪ್ಯಾಕೇಜ್ ನ ಎರಡನೇ ಹಂತದ ವಿವರಣೆ ನೀಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರೈತರು, ರಸ್ತೆ ಬದಿ ವ್ಯಾಪಾರಿಗಳು, ವಲಸೆ ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ಈ ಪ್ಯಾಕೇಜ್​ನಲ್ಲಿ ವಿಶೇಷ ಸವಲತ್ತುಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವೆ, ವಲಸೆ ಕಾರ್ಮಿಕರಿಗೆ, ಮುದ್ರಾದೊಂದಿಗೆ ಶಿಶು ಸಾಲ, ರಸ್ತೆ ಬದಿಯ ವ್ಯಾಪಾರಿಗಳಿಗೆ, ಗೃಹ, ಬುಡಕಟ್ಟು ಜನಾಂಗದ ಉದ್ಯೋಗ ಪೀಳಿಗೆಗೆ ಹಾಗೂ ಸಣ್ಣ ರೈತರನ್ನು ಒಳಗೊಂಡಂತೆ 9 ಪ್ರಮುಖ ನಿರ್ಧಾರಗಳನ್ನು ವಿವರಿಸಿದರು.

2020ರ ಮಾರ್ಚ್ 1 ಮತ್ತು ಏಪ್ರಿಲ್​ 30 ನಡುವಲ್ಲಿ ಕೃಷಿ ವಲಯಕ್ಕೆ 86,600 ಕೋಟಿ ಸಾಲ ಮಂಜೂರು ಮಾಡಿದೆ. 63 ಲಕ್ಷ ರೈತರು ಇದರ ಉಪಯೋಗ ಪಡೆದುಕೊಂಡಿದ್ದಾರೆ. ನಬಾರ್ಡ್​ನಿಂದ ಸಹಕಾರ ಬ್ಯಾಂಕ್ ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್​ಗಳಿಗೆ 2020ರ ಮಾರ್ಚ್​ನಲ್ಲಿ 29,500 ಕೋಟಿ ಹಣ ಒದಗಿಸಲಾಗಿದೆ. ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯಡಿ 2020 ರ ಮಾರ್ಚ್‌ನಲ್ಲಿ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ 4,200 ಕೋಟಿ ರೂ. ನೀಡಲಾಗಿದೆ. ಹಾಗೂ 2020 ರ ಮಾರ್ಚ್‌ನಿಂದ ರಾಜ್ಯ ಸರಕಾರಿ ಸಂಸ್ಥೆಗಳಿಗೆ ಕೃಷಿ ಉತ್ಪನ್ನಗಳನ್ನು ಖರೀದಿಸಲು 6,700 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಸುಮಾರು 3 ಕೋಟಿ ಸಾಮಾನ್ಯ ರೈತರು 4 ಲಕ್ಷ ಕೋಟಿ ರೂ.ಗಳ ಸಾಲವನ್ನು ಕಡಿಮೆ ಬಡ್ಡಿ ದರದಲ್ಲಿ ಪಡೆದಿದ್ದಾರೆ. ಅವರಿಗೆ ಆರ್‌ಬಿಐ ನಿರ್ಬಂಧಗಳನ್ನು ಸಹ ತೆಗೆದುಹಾಕಲಾಗಿದೆ.

Home add -Advt

ವಲಸೆ ಕಾರ್ಮಿಕರು ಸುರಕ್ಷಿತವಾಗಿ ಮನೆ ತಲುಪಲು ಕೇಂದ್ರ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಈಗಾಗಲೇ ಅವರಿಗೆ ಎರಡು ತಿಂಗಳ ಉಚಿತ ರೇಷನ್ ನೀಡುವ ಘೋಷಣೆ ಮಾಡಲಾಗಿದೆ.

5 ಕೆಜಿ ಅಕ್ಕಿ ಅಥವಾ ಗೋದಿ, 1 ಕೆಜಿ ಬೆಳೆಕಾಳುಗಳು ಸೇರಿದಂತೆ ಉಚಿತ ರೇಷನ್ ನೀಡಲಾಗುತ್ತಿದ್ದು, ಇದರಿಂದ 8 ಕೋಟಿ ವಲಸೆ ಕಾರ್ಮಿಕರಿಗೆ ಅನುಕೂಲವಾಗಿದೆ.

ಪ್ರಮುಖಾಂಶಗಳು:
* ಬೀದಿ ಬದಿ ವ್ಯಾಪಾರಿ, ಮನೆಯಲ್ಲಿ ಕೆಲಸ ಮಾಡೋರಿಗೆ 10 ಸಾವಿರದವರೆಗೆ ಸಾಲ ಯೋಜನೆ. ಒಂದು ತಿಂಗಳಲ್ಲಿ ಈ ಯೋಜನೆ ಜಾರಿ
* ಸಾಲ ಪಡೆದ ವ್ಯಾಪಾರಸ್ಥರು ಡಿಜಿಟಲ್ ಮೂಲಕ ವ್ಯವಹರಿಸಿದ್ರೆ ಹೆಚ್ಚು ಲಾಭ. ಇದಕ್ಕಾಗಿ 5 ಸಾವಿರ ಕೋಟಿ ರೂ. ಮೀಸಲು. ಈ ಯೋಜನೆಯಿಂದ 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಲಾಭ

* ಮುಂದಿನ ಎರಡು ತಿಂಗಳೂ 8 ಕೋಟಿ ವಲಸೆ ಕಾರ್ಮಿಕರಿಗೆ 3500 ಕೋಟಿ ರೂ. ಅನುದಾನದಲ್ಲಿ ಉಚಿತ ಪಡಿತರ ವಿತರಣೆ. ಪ್ರತಿ ವ್ಯಕ್ತಿಗೆ ಅಕ್ಕಿ ಅಥವಾ ಗೋಧಿ 5 ಕೆ.ಜಿ ಹಾಗೂ ಕುಟುಂಬಕ್ಕೆ 1 ಕೆ.ಜಿ. ಕಾಳು ರಾಜ್ಯ ಸರ್ಕಾರಗಳಿಂದ ವಿತರಣೆ
* ರೇಷನ್ ಕಾರ್ಡ್ ಇಲ್ಲದಿದ್ದರೂ ಪಡಿತರ ವಿತರಣೆ.
* ನ್ಯಾಷನಲ್ ಪೋರ್ಟಬಿಟಲಿ (ಒನ್ ನೇಷನ್, ಒನ್ ರೇಷನ್ ಕಾರ್ಡ್) ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಯಾವುದೇ ರಾಜ್ಯದ ರೇಷನ್ ಕಾರ್ಡ್ ಇದ್ದರೂ ದೇಶದ ಯಾವುದೇ ಭಾಗದಲ್ಲಾದರೂ ಬಳಕೆ ಮಾಡಲು ಅವಕಾಶ.
* ಕೊರೊನಾ ಸಮಯದಲ್ಲಿ ಕೃಷಿ ಕ್ಷೇತ್ರಕ್ಕೆ 63 ಲಕ್ಷ ಸಾಲ ಮಂಜೂರು. ಈ ಸಾಲದ ಒಟ್ಟು ಮೊತ್ತ 86,600 ಕೋಟಿ ರೂಪಾಯಿ.
* ನಗರ ಪ್ರದೇಶದಲ್ಲಿ ವಾಸವಾಗಿರುವ ಬಡವರಿಗೆ ಎಸ್‍ಡಿಆರ್‍ಎಫ್ ಮೂಲಕ 11 ಸಾವಿರ ಕೋಟಿ ಮಂಜೂರು.
* ನಿರಾಶ್ರಿತರರಿಗೆ ಸರ್ಕಾರದಿಂದ ದಿನಕ್ಕೆ ಮೂರು ಬಾರಿ ಊಟದ ವ್ಯವಸ್ಥೆ ಜೊತೆಗೆ ಹಣದ ವ್ಯವಸ್ಥೆ
* 12 ಸಾವಿರ ಸ್ವಸಹಾಯ ಸಂಘಗಳಿಂದ 3 ಕೋಟಿ ಮಾಸ್ಕ್ ಮತ್ತು 1.20 ಲಕ್ಷ ಲೀಟರ್ ಸ್ಯಾನಿಟೈಸರ್ ಉತ್ಪಾದಿಸಲು ಅವಕಾಶ-ಇದರಿಂದ ಪರೋಕ್ಷವಾಗಿ ನಗರ ಪ್ರದೇಶದಲ್ಲಿ ಉದ್ಯೋಗ ಹೆಚ್ಚಳ.
* ದೇಶಾದ್ಯಂತ ಪೈಸಾ ಪೋರ್ಟಲ್ ಜಾರಿ. ಹೊಸದಾಗಿ 7,200 ಸ್ವಸಹಾಯ ಸಂಘಗಳು ಕಾರ್ಯ ಆರಂಭಗೊಂಡಿವೆ.
* ಗ್ರಾಮೀಣ ಬ್ಯಾಂಕುಗಳಿಗೆ ನಬಾರ್ಡ್ ನಿಂದ 29,500 ಕೋಟಿ ಸಹಾಯ.
* ವಲಸೆ ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಇದರ ನೇರ ಲಾಭ ತಲುಪಿಸುವ ಗುರಿ ಇದೆ.
* ನಗರಗಳಿಂದ ಗ್ರಾಮಗಳಿಗೆ ತೆರಳಿರೋ ವಲಸೆ ಕಾರ್ಮಿಕರಿಗೆ ಪಂಚಾಯ್ತಿ ಮೂಲಕ ನರೇಗಾ ಯೋಜನೆ ಅಡಿ ಉದ್ಯೋಗ ಸೃಷ್ಟಿ.ಕನಿಷ್ಠ ವೇತನವನ್ನು 182ರಿಂದ 202 ರೂ.ಗಳಿಗೆ ಹೆಚ್ಚಳ
* ಪ್ರತಿಯೊಬ್ಬ ದಿನಗೂಲಿ ಕಾರ್ಮಿಕರ ಆರೋಗ್ಯ ತಪಾಸಣೆಗೆ ಪ್ರಾಮುಖ್ಯತೆ.
*ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆಗಾಗಿ ಹೊಸ ಮಾರ್ಗದರ್ಶಿ ಪ್ರಕಟ
* ಗ್ರಾಮ ಮತ್ತು ನಗರ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ವಲಸೆ ಕಾರ್ಮಿಕರಿಗೆ ಬಾಡಿಗೆ ಮನೆ. ಈ ಕುರಿತು ಸಂಬಂಧಿಸಿದ ಇಲಾಖೆಯಿಂದ ಶೀಘ್ರದಲ್ಲಿ ಮಾರ್ಗಸೂಚಿ ಪ್ರಕಟ
* ನಗರದ ಬಡವರಿಗೆ ಬಾಡಿಗೆ ಮನೆಗಳನ್ನು ಸಂಕೀರ್ಣಗಳಾಗಿ ಮಾಡುವ ಪ್ಲಾನ್
* ಅತಿ ಸಣ್ಣ ಸಾಲದಾರರಿಗೆ ಮುದ್ರಾ ಶಿಶು ಯೋಜನೆಯಡಿಯ ಸಾಲ. ಮುದ್ರಾ ಯೋಜನೆಗಾಗಿ 15 ಸಾವಿರ ಕೋಟಿ. 12 ತಿಂಗಳು ಮುದ್ರಾ ಯೋಜನೆಯಡಿ (ಶಿಶು ಲೋನ್) ಶೇ.2ರಷ್ಟು ಬಡ್ಡಿ ವಿನಾಯ್ತಿ. ಈ ಯೋಜನೆಯಿಂದ ಸುಮಾರು 3 ಕೋಟಿ ಜನರಿಗೆ ಲಾಭ ಸಿಗಲಿದೆ.
* ಮಧ್ಯಮ ವರ್ಗಕ್ಕೆ ಗೃಹ ಸಾಲದಲ್ಲಿ ಸಬ್ಸಿಡಿ. ಈ ಸಬ್ಸಿಡಿಯ ಅವಧಿಯನ್ನು ಮಾರ್ಚ್ 2021ರವರೆಗೆ ವಿಸ್ತರಿಸಲಾಗುವುದು. 6 ರಿಂದ 18 ಲಕ್ಷ ಆದಾಯವುಳ್ಳ ಮಧ್ಯಮ ವರ್ಗಕ್ಕೆ ಸಬ್ಸಿಡಿ ಸಿಗಲಿದೆ.
* ಉದ್ಯೋಗ ಸೃಷ್ಟಿಗಾಗಿ 6 ಸಾವಿರ ಕೋಟಿ ಅನುದಾನ. ಬುಡಕಟ್ಟು ಮತ್ತು ಆದಿವಾಸಿಗಳಿಗೆ ತೋಟಗಾರಿಕೆ ಮತ್ತು ಅರಣ್ಯೀಕರಣದಲ್ಲಿ ಉದ್ಯೋಗ ಸೃಷ್ಟಿ.
* ನಬಾರ್ಡ್ ಮೂಲಕ ರೈತರಿಗೆ 30 ಸಾವಿರ ಕೋಟಿ ತುರ್ತು ಹಣಕಾಸು ನೆರವು.
* ಮೀನುಗಾರಿಗೆ ಮತ್ತು ಹೈನುಗಾರಿಕೆ ಸೇರಿದಂತೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ಕೋಟಿ ಸಾಲ ವಿತರಣೆ.

Related Articles

Back to top button