Film & EntertainmentKannada NewsKarnataka NewsLatest

*ಮತ್ತೊಂದು ದುರಂತ: ಕಿರುತೆರೆ ನಟ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಇತ್ತಿಚಿನ ದಿನಗಳಲ್ಲಿ ಸಾಲು ಸಾಲು ಹೃದಯಾಘಾತ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟ ಬೆನ್ನಲ್ಲೇ ಇದೀಗ ಕಿರುತೆರೆಯ ಯುವ ನಟರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಕಿರುತೆರೆ ನಟ ಪವನ್ (25) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಹರಿಹರಪುರ ಗ್ರಾಮದ ಪವನ್, ಹಿಂದಿ, ತಮಿಳು ಧಾರವಾಹಿಗಳಲ್ಲಿ ಅಭಿನಯಿಸುತ್ತಿದ್ದರು. ಇದೀಗ ಹಠಾತ್ ಹೃದಯಾಘಾತದಿಂದ ಪವನ್ ಸಾವನ್ನಪ್ಪಿದ್ದಾರೆ.

Home add -Advt

ಮಂಡ್ಯ ಮೂಲದ ಪವನ್ ಮಹಾರಾಷ್ಟ್ರದಲ್ಲಿ ವಾಸವಾಗಿದ್ದರು. ಆಗಸ್ಟ್ 16ರಂದೇ ಪವನ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಹುಟ್ಟೂರಾದ ಮಂಡ್ಯಕ್ಕೆ ಮೃತದೇಹ ತರಲಾಗಿದ್ದು, ಇಂದು ಅಂತ್ಯಕ್ರಿಯೆ ನೆರವೇರಲಿದೆ.


Related Articles

Back to top button