*ಗೈರುಹಾಜರಿ ಮುಷ್ಕರ ಆರಂಭಿಸುವ ಎಚ್ಚರಿಕೆ ನೀಡಿದ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ*

ಪ್ರಗತಿವಾಹಿನಿ ಸುದ್ದಿ: ಜುಲೈ ಕೊನೆಯ ವಾರದೊಳಗೆ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಗೈರುಹಾಜರಿ ಮುಷ್ಕರ ಆರಂಭಿಸುತ್ತೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್‌ಮೆಂಟ್ ಸೌಲಭ್ಯವನ್ನು ಜಾರಿ ಮಾಡಬೇಕು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಮರುಚಾಲನೆ ನೀಡಬೇಕು. ನೌಕರರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈ ಕೂಡಲೇ ಅನುಷ್ಠಾನಕ್ಕೆ ತರುವಂತೆ ಆಗ್ರಹಿಸಿದ್ದಾರೆ.‌ ರಾಜ್ಯ … Continue reading *ಗೈರುಹಾಜರಿ ಮುಷ್ಕರ ಆರಂಭಿಸುವ ಎಚ್ಚರಿಕೆ ನೀಡಿದ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ*