EducationKarnataka NewsLatestPolitics

*ಶಾಮನೂರು ಶಿವಶಂಕರಪ್ಪ ವಿಧಿವಶ ಹಿನ್ನೆಲೆ: ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಹಿರೀಯ ಶಾಸಕ, ಕರ್ನಾಟಕ ರಾಜಕೀಯ ಭೀಷ್ಮ ಎಂದೇ ಖ್ಯಾತಿ ಪಡೆದಿದ್ದ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಾವಣಗೆರೆ ಎಂದರೇ ಶಾಮನೂರು ಸ್ಗ್ವಶಂಕರಪ್ಪ ಎಂಬಷ್ಟರಮಟ್ಟಿಗೆ ಗಮನಸೆಳೆದಿದ್ದ ರಾಜಕೀಯ ಧುರೀಣ, ಶಿಕ್ಷಿಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ತಂದಿದ್ದ ನಾಯಕನ ಅಗಲಿಕೆ ಹಿನ್ನೆಲೆಯಲ್ಲಿ ಇಂದು ದಾಅಣಗೆರೆ ನಗರ ವ್ಯಾಪ್ತಿಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ ನೀಡಲಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಅಮಿ ತಿಳಿಸಿದ್ದಾರೆ.

Home add -Advt

ಇಂದಿನ ರಜೆಯನ್ನು ಮುಂದಿನ ಶನಿವಾರ ಡಿ.27ರಂದು ಪೂರ್ಣ ದಿನ ಶಾಲೆ ನಡೆಸಿ ಸರಿದೂಗಿಸಲಾಗುವುದು ಎಂದು ತಿಳಿಸಿದ್ದಾರೆ.

ಇಂದು ಶಾಮನೂರು ಶಿವಶಮ್ಕರಪ್ಪ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಳಿಗ್ಗೆ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಅವರ ಮನೆಯಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಲ್ಲಿ ಅಂತಿಮ ವಿಧಿ-ವಿಧಾನಗಳನ್ನು ನಡೆಸಲಾಗುತ್ತಿದೆ. ಬಳಿಕ ಹೈಸ್ಕೂಲು ಮೈದಾನಕ್ಕೆ ಶಾಮನೂರು ಅವರ ಪಾರ್ಥೀವ ಶರೀರ ರವಾನಿಸಲಾಗುತ್ತದೆ. ಅಲ್ಲಿ ಅಂತಿಮ ವ್ಯವಸ್ಥೆಗೆ ಸಿದ್ಧತೆ ಮಾಡಲಾಗಿದೆ. ಸಂಜೆ ೪ ಗಂಟೆಯವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಬಳಿಕ ಸಂಜೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಪತ್ನಿ ಸಮಾಧಿಯ ಪಕ್ಕದಲ್ಲೇ ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ.

Related Articles

Back to top button