Karnataka News

*ಜೂನ್ 8 ರವರೆಗೂ ಕೊಂಚ ಬ್ರೇಕ್ ನೀಡಿದ ಮಳೆರಾಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 15 ದಿನಕ್ಕೂ ಹೆಚ್ಚು ಕಾಲ ಸುರಿದ ಮಳೆಗೆ ಜನ ಹೈರಾಣಾಗಿ, ಹಲವು ಕಡೆ ಸಾಕಷ್ಟು ಅವಾಂತರಗಳು ಸೃಷ್ಠಿಯಾಗಿದೆ. ಆದರೆ ಸದ್ಯ ಮಳೆರಾಯ ಕೊಂಚ ಬ್ರೇಕ್ ಕೊಟ್ಟಿದ್ದಾನೆ.

ಹೌದು.. ಕರ್ನಾಟಕದಲ್ಲಿ ಮಳೆ ಬಿಡುವು ನೀಡಿದ್ದು ಜೂನ್ 8 ರವರೆಗೂ ಸಾಧಾರಣ ಮಳೆ ಮುಂದುವರಿಯಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದ್ದು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

Related Articles

Back to top button