Latest

ನಿಪ್ಪಾಣಿ, ಚಿಕ್ಕೋಡಿ ಕ್ಷೇತ್ರಕ್ಕೆ ಕೇಂದ್ರೀಯ ವಿದ್ಯಾಲಯ ಮಂಜೂರಿಗೆ ಕೇಂದ್ರ ಸಚಿವೆ ಅನ್ನಪೂರ್ಣಾ ದೇವಿಗೆ ಜೊಲ್ಲೆ ದಂಪತಿ ಮನವಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಸಚಿವೆರಾದ ಅನ್ನಪೂರ್ಣಾ ದೇವಿ ಅವರನ್ನು ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಭೇಟಿ ಮಾಡಿದರು.

ಶುಕ್ರವಾರ ನವದೆಹಲಿಯ ಶಾಸ್ತ್ರಿ ಭವನದಲ್ಲಿ, ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯ ಸಚಿವರಾದ ಅನ್ನಪೂರ್ಣಾ ದೇವಿ ಅವರನ್ನು ಮುಜರಾಯಿ ಹಜ್ ಹಾಗೂ ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಅವರು ಭೇಟಿಯಾಗಿ, ನಿಪ್ಪಾಣಿ ಮತಕ್ಷೇತ್ರದಲ್ಲಿ, ಕೇಂದ್ರೀಯ ವಿದ್ಯಾಲಯ, ಮತ್ತು ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯವನ್ನು, ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ನವೋದಯ ವಿದ್ಯಾಲಯವನ್ನು ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
ಯಕ್ಸಂಬಾ ಬೀರೇಶ್ವರ ಕೋ ಆಫ್ ಕ್ರೆಡಿಟ್ ಸೊಸೈಟಿ ಲಿಗೆ 30 ಕೋಟಿ 8 ಲಕ್ಷ ರೂ. ಲಾಭ

Related Articles

Back to top button