Kannada NewsLatest

ನಿಡಸೋಸಿಯ ದುರದುಂಡೀಶ್ವರ ಸಿದ್ದಸಂಸ್ಥಾನ ಮಠಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಯವರು ನಿಡಸೋಸಿಯ ದುರದುಂಡೀಶ್ವರ ಸಿದ್ದಸಂಸ್ಥಾನ ಮಠಕ್ಕೆ ಭೇಟಿ ನೀಡಿ, ಶ್ರೀ ಮನ್ನಿರಂಜನ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿಯವರ ದಿವ್ಯಾಶೀರ್ವಾದ ಪಡೆದು, ಅವರು ನೀಡಿದ ಗೌರವ ಸತ್ಕಾರವನ್ನು ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಸಚಿವೆ, ಮಠಾದೀಶರ ಆಶೀರ್ವಾದದಿಂದ ಮುಜರಾಯಿ ಖಾತೆ ದೊರಕಿದೆ ಈ ಅವಧಿಯಲ್ಲಿ, ದೆವಸ್ಥಾನಗಳು, ಮಠಗಳ ಜಿರ್ಣೋದ್ಧಾರಕ್ಕೆ ಶ್ರಮಿಸುತ್ತೇನೆ ಆಧ್ಯಾತ್ಮಿಕ ರಂಗದಲ್ಲಿ ವಿಶ್ವದ ಗುರುವಾಗಿ ಗುರುತಿಸಿಕೊಂಡಿರುವ ನಮ್ಮ ದೇಶ ಸನಾತನ ಸಂಸ್ಕೃತಿಗೆ ಹೆಚ್ಚಿನ ಆಧ್ಯತೆ ನೀಡುತ್ತದೆ ಅದರಲ್ಲಿ ಭಾರತಿಯ ಜನತಾ ಪಕ್ಷ ದೇಶದ ಸಂಸ್ಕೃತಿ ಆಚಾರ-ವಿಚಾರಗಳ ಉಳಿವಿಗೆ ಶ್ರಮಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಆನಂದ ಗಂಧ, ಮಹಾವೀರ ಬಾಗಿ, ಚಿದಾನಂದ ಕಿಲ್ಲೇದಾರ, ರಾಜು ಚೌಗಲಾ, ಡಿ.ಡಿ.ಪಿ.ಆಯ ಮಹಾಂತೇಶ ತಳವಾರ ಹಾಗೂ ಮತ್ತಿತ್ತರು ಉಪಸ್ಥಿತರಿದ್ದರು.
ನಾಳೆ ಸಂಜೆ ಅಧಿಕಾರಿಗಳೊಂದಿಗೆ ಸಿಎಂ ಮಹತ್ವದ ಸಭೆ; ಟಫ್ ರೂಲ್ಸ್ ಭವಿಷ್ಯ ನಿರ್ಧಾರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button