Kannada NewsLatest

*ನಿಪ್ಪಾಣಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ; ನಿಪ್ಪಾಣಿ: ಬೆಳಗಾವಿ ಜಿಲ್ಲೆ ನಿಪ್ಪಾಣಿ ಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸ್ಥಳೀಯ ಮುಖಂಡರು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ಸೋಮವಾರ ತಮ್ಮ ನಾಮಪತ್ರವನ್ನು ಚುನಾವಣಾಧಿಕಾರಿ ಜಿ.ಎನ್. ಮಂಜುನಾಥಸ್ವಾಮಿ ಅವರಿಗೆ ಸೋಮವಾರ ಸಲ್ಲಿಸಿದದರು.

ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಜನತೆ ಸೇವೆ ನಮ್ಮಿಂದ ಇನ್ನಷ್ಟಾಗಲಿಯೆಂದು ನಾನು ರಾಜಕೀಯ ಕಣಕ್ಕೆ ಇಳಿದು ಮತದಾರರ ಆಶಿರ್ವಾದದಿಂದ ಎರಡು ಬಾರಿ ಶಾಸಕಿಯಾದೆ. ಶಾಸಕಿಯಾಗಿ ಜನತೆ ಸೇವೆ ಮಾಡಿ ಮತ್ತೆ ಅವರ ಆಶಿರ್ವಾದದಿಂದ ಎರಡು ಬಾರಿ ಸಚಿವೆಯಾಗಿ ರಾಜ್ಯದ ಸೇವೆ ಮಾಡುವ ಅವಕಾಶ ಸಿಕ್ಕಿತು. ರಾಜ್ಯ ರಾಜಕಾರಣದವರೆಗೆ ಬೆಳೆಸಿರುವ ನನ್ನ ಕ್ಷೇತ್ರದ ಜನಬಾಂಧವರ ಪ್ರೀತಿ, ವಿಶ್ವಾಸ, ಬೆಂಬಲಕ್ಕೆ ನಾನು ಸದಾ ಚಿರಋಣಿಯಾಗಿರುವೆ. ಸಾಂಸ್ಕೃತಿಕ, ಕ್ರೀಡೆ ಮೊದಲಾದ ಎಲ್ಲ ಕ್ಷೇತ್ರಗಳ ಸಹಾಯದಿಂದ ಯುವಜನರು, ಮಹಿಳೆಯರಿಗೆ ಹಾಗೂ ಪುರುಷರು ಎಲ್ಲ ಕ್ಷೇತ್ರದಲ್ಲಿ ಮೆರೆಯಬೇಕೆನ್ನುವ ಹಂಬಲದಿಂದ ಶ್ರಮಿಸಿದ್ದೇನೆ. ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡುವುದೆ ನನ್ನ ಸಂಕಲ್ಪವಾಗಿದೆ. ಕ್ಷೇತ್ರದಲ್ಲಿ ಹಮ್ಮಿಕೊಂಡ ಅಭಿವೃದ್ಧಿ ಹಾಗೂ ಜನರ ಹಿತದೃಷ್ಟಿಯಿಂದ ಮಾಡಿದ ಕಾರ್ಯಗಳಿಂದಾಗಿ ಮತದಾರರು ನನ್ನನ್ನು ಮತ್ತೊಮ್ಮೆ ಆಶೀರ್ವದಿಸಿ ಬೆಂಬಲಿಸುವರು’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಕಾರ್ಯಾಧ್ಯಕ್ಷ ಸಹಕಾರ ರತ್ನ ಚಂದ್ರಕಾAತ ಕೋಠಿವಾಲೆ, ಸಂಚಾಲಕ ಪಪ್ಪುಅಣ್ಣಾ ಪಾಟೀಲ, ಸ್ಥಳೀಯ ನಗರಸಭೆ ಅಧ್ಯಕ್ಷ ಜಯವಂತ ಭಾಟಲೆ, ಸ್ಥಾಯಿ ಸಮಿತಿ ಚೇರ್ಮನ್ ರಾಜೇಂದ್ರ ಗುಂದೇಶಾ, ಬಿಜೆಪಿ ಪಕ್ಷದ ನಗರ ಘಟಕದ ಅಧ್ಯಕ್ಷ ಪ್ರಣವ ಮಾನವಿ, ಗ್ರಾಮೀಣ ಘಟಕದ ಅಧ್ಯಕ್ಷ ಪವನ ಪಾಟೀಲ, ಮಹಿಳಾ ಮೋರ್ಚಾ ನಗರ ಘಟಕದ ಅಧ್ಯಕ್ಷೆ ವಿಭಾವರಿ ಖಾಂಡಕೆ, ಗ್ರಾಮೀಣ ಘಟಕದ ಅಧ್ಯಕ್ಷೆ ಸರೋಜಿನಿ ಜಮದಾಡೆ, ಸುಹಾಸ ಗೂಗೆ, ಸಿದ್ದು ನರಾಟೆ, ಸುರೇಶ ಪಾಟೀಲ, ಸುರೇಶ ಶೆಟ್ಟಿ, ಅಭಯ ಮಾನವಿ ಮೊದಲಾದವರು ಸೇರಿದಂತೆ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

https://pragati.taskdun.com/s-a-ramadasaravinda-limbavalibjp-ticketmiss/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button