Kannada NewsKarnataka NewsLatest
*ಕಪ್ಪೆ ಚಿಪ್ಪು ಆರಿಸಲು ಹೋಗಿ ದುರಂತ: ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ*

ಪ್ರಗತಿವಾಹಿನಿ ಸುದ್ದಿ: ಕಪ್ಪೆ ಚಿಪ್ಪು ಆರಿಸಲು ಹೋಗಿ 10 ಜನರು ಜಲಸಮಾಧಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 10 ಜನರು ನಿನ್ನೆ ಜಲಸಮಾಧಿಯಾಗಿದ್ದರು. ಇಬ್ಬರು ನಾಪತ್ತೆಯಾಗಿದ್ದರು. ಶೋಧ ಕಾರ್ಯಾಚರಣೆ ವೇಳೆ ನದಿಯಲ್ಲಿ ಇಂದು ಮತ್ತೋರ್ವನ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಇಂದು ನದಿಯಲ್ಲಿ ಶೋಧಕಾರ್ಯ ನಡೆಸುತ್ತಿದ್ದ ವೇಳೆ ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಪತ್ತೆಯಾಗಿದೆ. ಇವರೊಂದಿಗೆ ಇನ್ನೊಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಎನ್ಡಿಆರ್ಎಫ್, ಈಶ್ವರ ಮಲ್ಪೆ ತಂಡ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಕಪ್ಪೆ ಚಿಪ್ಪು ಆರಿಸಲು ಹೋಗಿ 11 ಜನರು ಜಲ ಸಮಾಧಿಯಾಗಿದ್ದಾರೆ. ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.



