Belagavi NewsBelgaum NewsElection NewsKannada NewsKarnataka News

ಹುಕ್ಕೇರಿ ಶ್ರೀಗಳ ಆಶಿರ್ವಾದ ಪಡೆದ ಶೆಟ್ಟರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿನ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಗೆ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭೇಟಿ ನೀಡಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಗೌರವಿಸಿ, ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಮಾತನಾಡಿ, ನರೇಂದ್ರ ಮೋದಿ ಅವರಿಂದ ದೇಶಕ್ಕೆ ಹೊಸ ಬದಲಾವಣೆಯಾಗಿದೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಆಶೀರ್ವಾದ ಬೇಕು. ಬೆಳಗಾವಿ ಲೋಕಸಭೆಯಿಂದ ನನ್ನಗೆ ಆಯ್ಕೆ ಮಾಡಿ ಆಶೀರ್ವದಿಸಿ ಎಂದು ಕೋರಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ಮುಕ್ತಾರ ಹುಸೇನ್ ಪಠಾಣ, ಈರಣ್ಣಾ ಕೋತ, ವೀರುಪಾಕ್ಷಯ್ಯ ನೀರಲಗಿಮಠ, ಪಾಲಿಕೆ ಸದಸ್ಯೆ ವೀಣಾ ವಿಜಾಪುರೆ ದಾದಾಗೌಡ ಬಿರಾದರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button